Kannada NewsKarnataka NewsLatest

*ಎಂಗೇಜ್ಮೆಂಟ್ ಸಡಗರದಲ್ಲಿ ದೇವಸ್ಥಾನಕ್ಕೆ ಹೋಗುವಾಗ ದುರಂತ; ಅಪಘಾತದಲ್ಲಿ ಯುವಕ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಎಂಗೇಜ್ಮೆಂಟ್ ಸಡಗರದಲ್ಲಿದ್ದ ಯುವಕ ದೇವಸ್ಥಾನಕ್ಕೆಂದು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 28 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಶಾಲ್ ಮೃತ ದುರ್ದೈವಿ. ಕೃಷಿ ಇಲಾಖೆಯಲ್ಲಿ ಟೆಕ್ನಿಕಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಹೊಳಲ್ಕೆರೆ ತಾಲೂಕಿನ ತಿರುಮಲ ಡಾಬಾ ಬಳಿ ಈ ದುರಂತ ಸಂಭವಿಸಿದೆ.

ವಿಶಾಲ್ ಗೆ ನಾಳೆ ಭಾನುವಾರ ಶಿವಮೊಗ್ಗ ಮೂಲದ ಯುವತಿಯೊಂದಿಗೆ ನಿಶ್ಚಿತಾರ್ಥ ನಿಗದಿಯಾಗಿತ್ತು. ನಿಶ್ಚಿತಾರ್ಥದ ಸಡಗರದ ನಡುವೆ ಇಂದು ಆಂಜನೇಯ ದೇವಸ್ಥಾನಕ್ಕೆಂದು ಕಾರಿನಲ್ಲಿ ಹೊರಟಿದ್ದ. ಈ ವೇಳೆ ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ವಿಶಾಲ್ ಕೊನೆಯುಸಿರೆಳೆದಿದ್ದಾನೆ.

Home add -Advt

ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button