*ಬೆಳಗಾವಿಯಲ್ಲಿ ಅಕ್ಕ-ತಂಗಿಯರ ಮೇಲೆ ಹರಿದ ಕಾರು: ಅಕ್ಕ ಸಾವು*

ಪ್ರಗತಿವಾಹಿನಿ ಸುದ್ದಿ: ಶಾಲೆಯಿಂದ ಮನೆಗೆ ಮರಳುತ್ತಿದ್ದ ಇಬ್ಬರು ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಮೇಖಳಿ ಗ್ರಾಮದ ಅನುದಾನಿತ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಾದ ಜಯಶ್ರೀ ಕೋಟರೆ ಮತ್ತು ಭಾಗ್ಯಶ್ರೀ ಕೋಟರೆ ಅವರು ಶಾಲೆ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ನಾಗರಮುನ್ನೋಳಿ ಗ್ರಾಮದಿಂದ ರಾಯಬಾಗ ಪಟ್ಟಣದ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ … Continue reading *ಬೆಳಗಾವಿಯಲ್ಲಿ ಅಕ್ಕ-ತಂಗಿಯರ ಮೇಲೆ ಹರಿದ ಕಾರು: ಅಕ್ಕ ಸಾವು*