Kannada NewsKarnataka NewsLatest
*ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ಯುವಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರದ ಬಳಿ ಈ ದುರಂತ ಸಂಭವಿಸಿದೆ. ಭಟ್ಕಳದ ಆಜಾದ್ ನಗರದ ನಿವಾಸಿಗಳಾದ ಬಿಲಾಲ್ ಹಾಗೂ ಅಯಾನ್ ಮೃತ ದುರ್ದೈವಿಗಳು.
ಅಪಘಾತದ ರಭಸಕ್ಕೆ ಬಿಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಅಯಾನ್ ನನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ. ಇಬ್ಬರೂ ಶಿರಾಲಿಯಿಂದ ಭಟ್ಕಳಕ್ಕೆ ಬರುತ್ತಿದ್ದಾಗ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ.




