Karnataka News
*ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ; ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಕೋಲಾರ ಮೂಲದ ಮಹೇಶ್ (45) ಉದ್ವಿತ (2) ರತ್ನಮ್ಮ (60) ಹಾಗೂ ಬೈಕ್ ಸವಾರ ಸಾವನ್ನಪ್ಪಿದ್ದಾರೆ.
ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.




