Kannada NewsKarnataka NewsLatest
*ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ವ್ಯಕ್ತಿ ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ೭೦ ವರ್ಷದ ವ್ಯಕ್ತಿಯೋರ್ವರು ಸಜೀವದಹನವಾಗಿರುವ ಘಟನೆ ನಡೆದಿದೆ.
ಚಿಕ್ಕಬಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಕ್ರಾಸ್ ಬಳಿ ಆಲ್ಟೋ ಕಾರು ಹೊತ್ತಿ ಉರಿದಿದ್ದು, ಚಾಲಕನ ಸೀಟ್ ನಲ್ಲಿ ಇದ್ದ ವ್ಯಕ್ತಿ ಸುಟ್ಟು ಹೋಗಿದ್ದಾರೆ. ಪೆನುಮಲೆ ಗ್ರಾಮದ ಉದಯ್ ಕುಮಾರ್ (70) ಮೃತ ದುರ್ದೈವಿ.
ಬಾಗೇಪಲ್ಲಿಯಿಂದ ಸ್ವಗ್ರಾಅಮಕ್ಕೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಾರ್ಟ್ ಸಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದ್ದು, ಈ ದುರಂತ ಸಂಭವಿಸಿದೆ. ಬಾಗೇಪಲ್ಲಿ ಪೊಲೀಸ್ ಠಾನೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


