*ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ನಾಲ್ವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಸಾಲು ಸಾಲು ಅವಾಂತರಗಳು ಸಭವಿಸುತ್ತಿವೆ. ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಕಾರಿನೊಳಗಡೆ ಸಿಲುಕಿ ನಾಲ್ವರು ಪರದಾಡಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಬಳಿ ಈ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ಮರಬಿದ್ದಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಕಾರಿನೊಳಗಡೆ ಸಿಲುಕಿಕೊಂಡವರು ಹೊರಬರಲಾಗದೆ ರಕ್ಷಣೆಗಾಗಿ ಮೊರೆಯಿಟ್ಟಿದ್ದಾರೆ. ಇತರ ವಾಹನ ಸವಾರರು, ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಕಾರು … Continue reading *ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ನಾಲ್ವರ ಸ್ಥಿತಿ ಗಂಭೀರ*