Wanted Tailor2
Cancer Hospital 2
Bottom Add. 3

*ಜಾತಿ ಗಣತಿ ವರದಿ ಕುರಿತು ಸಿಎಂಗೆ ಪತ್ರ: ಡಿಸಿಎಂ ನಿರಾಕರಣೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಜಾತಿ ಗಣತಿ ವರದಿ ಅಂಗೀಕಾರ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಪತ್ರ ಬರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರಸಗಟಾಗಿ ತಳ್ಳಿ ಹಾಕಿದ್ದಾರೆ.

ತಾವು ಸಿಎಂ ಅವರಿಗೆ ಯಾವುದೇ ಪತ್ರ ಬರೆದಿಲ್ಲ. ಈ ವಿಚಾರವಾಗಿ ಅವರ ಜತೆ ಚರ್ಚೆಯನ್ನೂ ನಡೆಸಿಲ್ಲ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆದರೂ ಈ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿ ಆಗಿರುವುದು ಸತ್ಯಕ್ಕೆ ದೂರವಾದುದು ಹಾಗೂ ಕಪೋಲ ಕಲ್ಪಿತ. ತಮ್ಮ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವೆ ತಂದು ಹಾಕಲು, ಒಡಕು ಮೂಡಿಸಲು ಈ ಸುಳ್ಳು ಸುದ್ದಿಯನ್ನು ಸೃಷ್ಠಿಸಲಾಗಿದೆ ಎಂದು ಹೇಳಿದ್ದಾರೆ.

Bottom Add3
Bottom Ad 2

You cannot copy content of this page