Belgaum News
-
*ನಿಯಮ ಉಲ್ಲಂಘಿಸಿದರೆ ದಂಡ, ಶಿಕ್ಷೆ: ತಂಬಾಕು ಮಾರಾಟಗಾರರಿಗೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಂಬಾಕು ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಮತ್ತು ಕೋಟ್ಟಾ-2003 ರ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರವನ್ನು ರಾಮದುರ್ಗ ತಾಲ್ಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಮತ್ತು…
Read More » -
*ಬೆಳಗಾವಿಯಲ್ಲಿ ನಿಷೇದಾಜ್ಞೆ ಜಾರಿ: ಡಿಸಿ ಆದೇಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರ ವತಿಯಿಂದ 2026 ರ ಮಾರ್ಚ & ಎಪ್ರಿಲ್ ತಿಂಗಳಲ್ಲಿ ಎಸ್.ಎಸ್.ಎಲ್.ಸಿ…
Read More » -
*ಯಲ್ಲಮ್ಮ ದೇವಸ್ಥಾನದ ಹುಂಡಿ ಏಣಿಕೆ: 3.07 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸವದತ್ತಿಯ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಸ್ಥಾನದ ಹುಂಡಿಗಳ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 3.07 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಈ ಬಾರಿ…
Read More » -
*ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಆಯೋಜನೆ: ಶುಕ್ರವಾರದಿಂದ ಮೂರು ದಿನ ಸ್ಪರ್ಧೆ*
ಪ್ರಗತಿವಾಹಿನಿ ಸುದ್ದಿ: ಟಿಳಕವಾಡಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವತಿಯಿಂದ 16 ನೇ ಎಂ. ಕೆ. ನಂಬಿಯಾರ್ ಸ್ಮರಣಾರ್ಥ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ-2026 ಮಾ.13-15 ರ ವರೆಗೆ ಹಮ್ಮಿಕೊಳ್ಳಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಆರ್.ಎಲ್. ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಚೇರ್ಮನ್, ನ್ಯಾಯವಾದಿ ಆರ್.ಎಸ್.ಮುತಾಲಿಕ್ ಹಾಗೂ ಕೆಎಲ್ ಎಸ್ ಸಂಸ್ಥೆಯ ಕಾರ್ಯದರ್ಶಿ ಹಾಗೂ ನ್ಯಾಯವಾದಿ ಎಸ್.ವಿ.ಗಣಾಚಾರಿ ಅವರು ಮಾಹಿತಿ ನೀಡಿದರು. ಭಾರತದ ಮಾಜಿ ಅಟಾರ್ನಿ ಜನರಲ್ ಹಾಗೂ ನಮ್ಮ ಸಂಸ್ಥೆಯ ಹೆಮ್ಮೆಯ ಹಳೆಯ ವಿದ್ಯಾರ್ಥಿ ಪದ್ಮವಿಭೂಷಣ ಕೆ. ಕೆ. ವೇಣುಗೋಪಾಲ್ ಅವರ ಪ್ರಾಯೋಜಕತ್ವದಲ್ಲಿ ಈ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾರತದ 9 ವಿವಿಧ ರಾಜ್ಯಗಳಿಂದ ಒಟ್ಟು 30 ತಂಡಗಳು ಭಾಗವಹಿಸಲಿವೆ. ಉಚ್ಚ ನ್ಯಾಯಾಲಯ ಹಾಗೂ ಜಿಲ್ಲಾ ನ್ಯಾಯಾಲಯದ ಸುಮಾರು 50 ಹಿರಿಯ ವಕೀಲರು ಮತ್ತು ಶಿಕ್ಷಣ ತಜ್ಞರು ಮೂಟ್ ನ್ಯಾಯಾಧೀಶರಾಗಿ ಪಾಲ್ಗೊಂಡು ಸ್ಪರ್ಧಾಳುಗಳ ಮೌಲ್ಯಮಾಪನ ಮಾಡಲಿದ್ದಾರೆ. ವಿವಿಧ ವಿಭಾಗಗಳಲ್ಲಿ ವಿಜೇತರಾದವರಿಗೆ ಒಟ್ಟು ರೂ. 1,35,000 ನಗದು ಬಹುಮಾನ ವಿತರಿಸಲಾಗುವುದು. ಇದಲ್ಲದೆ, ಬೆಳಗಾವಿಯ ಹಿರಿಯ ವಕೀಲ ಅಶೋಕ ಎನ್. ಪೋತದಾರ ಅವರ ಹೆಸರಿನಲ್ಲಿ ಶ್ರೇಷ್ಠ ವಾಗ್ಮಿ (Best Mooter) ಪ್ರಶಸ್ತಿಯೊಂದಿಗೆ ರೂ. 6,000 ನಗದು ಬಹುಮಾನ ನೀಡಲಾಗುವುದು. ಸ್ಪರ್ಧೆಯ ಉದ್ಘಾಟನಾ ಸಮಾರಂಭ ಮಾರ್ಚ್ 13 ರಂದು ಸಂಜೆ 5.30 ಕ್ಕೆ ಬೆಳಗಾವಿಯ ಟಿಳಕವಾಡಿ ಕೆಎಲ್ಎಸ್ ಪ್ಲಾಟಿನಂ ಜುಬಿಲಿ ಕಟ್ಟಡದ ಕೆ. ಕೆ. ವೇಣುಗೋಪಾಲ್ ಸಭಾಂಗಣದಲ್ಲಿ ನಡೆಯಲಿದೆ. ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜ್ಯೋತಿ ಎಂ ಉಪಸ್ಥಿತರಿರುವರು. ಕೆಎಲ್ ಎಸ್ ಅಧ್ಯಕ್ಷ, ಅಡ್ವೊಕೇಟ್ ಪ್ರದೀಪ ಎಸ್. ಸಾವಕಾರ ಅಧ್ಯಕ್ಷತೆ ವಹಿಸುವರು. ಕೆಎಲ್ ಎಸ್ ಚೇರ್ಮನ್ ಎ.ಕೆ.ಟಗಾರೆ ಉಪಸ್ಥಿತರಿರುವರು. ಕರ್ನಾಟಕ ಲಾ ಸೊಸೈಟಿಯ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿರುವರು. ಇತ್ತೀಚೆಗೆ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಸಂಸ್ಥೆಯ 8 ಹಳೆಯ ವಿದ್ಯಾರ್ಥಿಗಳಾದ ಮೌನೇಶ ಬಡಿಗೇರ, ನವೀನ ಕೋಪಾರ್ಡೆ, ಹಳ್ಯಾಳಪ್ಪ, ಪ್ರಿಯಂಕಾ ರಾಜಗೊಳ್ಕರ್, ಜಗದೀಶ ಕಿತ್ತೂರು, ಶ್ರೇಯಾ ಉತ್ತೂರೆ, ವಿಜಯಕುಮಾರ ಬುದ್ರಿ ಮತ್ತು ನಾಗರಾಜ ತಳವಾರ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು. ಸಮಾರೋಪ ಸಮಾರಂಭ ಮಾರ್ಚ್ 15 ರಂದು ಸಂಜೆ 4:30 ಕ್ಕೆ ನಡೆಯಲಿದೆ. ಗೌರವಾನ್ವಿತ ನ್ಯಾಯಮೂರ್ತಿ ವಿಜಯಕುಮಾರ್ ಎ. ಪಾಟೀಲ ಉಪಸ್ಥಿತರಿರುವರು. ಪ್ರದೀಪ ಎಸ್. ಸಾವಕಾರ ಅಧ್ಯಕ್ಷತೆ ವಹಿಸುವರು. ಸಮಾರಂಭದಲ್ಲಿ ಬೋರ್ಡ್ ಚೇರ್ಮನ್, ಕಾರ್ಯದರ್ಶಿಗಳು ಮತ್ತು ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿರುವರು ಎಂದು ವಿವರಿಸಿದರು. ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್, ಅಣಕು ನ್ಯಾಯಾಲಯ ಸ್ಪರ್ಧೆಯ ಸಂಯೋಜಕಿ ಪ್ರೊ.ಅಶ್ವಿನಿ ಪರಬ್, ಅಣಕು ನ್ಯಾಯಾಲಯ ಸ್ಪರ್ಧೆಯ ಕಾರ್ಯದರ್ಶಿ ಸುನಿಧಿ ಜೋಶಿ, ಮಹಾವಿದ್ಯಾಲಯದ ಮಾಧ್ಯಮ ಸಂಪರ್ಕಾಧಿಕಾರಿ ಮಂಜುನಾಥ ಕಾಳೆ ಹಾಗೂ ವಿದ್ಯಾರ್ಥಿಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. *ಅಡುಗೆ ಅನಿಲ…
Read More » -
*ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು ಬರುತ್ತಿದ್ದು, ಸಮಾಜದ ವಿವಿಧ ವರ್ಗಗಳು ಅವರಿಗೆ…
Read More » -
*ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ: ಬೆಳಗಾವಿಯ ಡಾ.ವಿಶಾಖ ಹೆಗಡೆ ಸಾಧನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿನಿ ಡಾ.ವಿಶಾಖ ಹೆಗಡೆ ಅವರು ವೈದ್ಯಕೀಯ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ 6ನೇ ರ್ಯಾಂಕ್ ಪಡೆದು ರಾಜ್ಯ ಮಟ್ಟದಲ್ಲಿ…
Read More » -
KLS GIT ವಿದ್ಯಾರ್ಥಿಗಳ ಅದ್ಭುತ ಸಾಧನೆ
ರಾಷ್ಟ್ರ ಮಟ್ಟದ ಮಣಿಪಾಲ್ ರೆವೆಲ್ಸ್ ಕಪ್ 2026 ಮತ್ತು ರಾಜ್ಯ ಮಟ್ಟದ ಬೆಸ್ಟ್ ಫಿಸಿಕ್ ಸ್ಪರ್ಧೆಯಲ್ಲಿ KLS GIT ವಿದ್ಯಾರ್ಥಿಗಳ ಅದ್ಭುತ ಸಾಧನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ…
Read More » -
*ಬೆಳಗಾವಿ ಬಳಿ ಭೀಕರ ಅಪಘಾತ: ರಾಜುಗೌಡ ಪಾಟೀಲ ಸಾವು*
ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರೇಬಾಗೇವಾಡಿ ಸಮೀಪ ರಾಷ್ಟ್ರೀಯ…
Read More » -
*ಮಾ.18 ರಂದು ಬೆಳಗಾವಿ ಪಾಲಿಕೆಯ ಮಹಾಪೌರ, ಉಪಮಹಾಪೌರ ಚುನಾವಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮಹಾಪೌರರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಚುನಾವಣೆಯು ದಿನಾಂಕ: 18-03-2026 ರಂದು ಮಧ್ಯಾಹ್ನ 1 ಗಂಟೆಗೆ…
Read More » -
*ಮಾರ್ಚ್ 14 ರಿಂದ ಸಂಭ್ರಮದ ಬಸವನ ಕುಡಚಿಜಾತ್ರಾ ಮಹೋತ್ಸವ*
ಪ್ರಗತಿವಾಹಿನಿ ಸುದ್ದಿ: ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ತಾಲೂಕಿನ ಬಸವನ ಕುಡಚಿಯ ಶ್ರೀ ಬಸವೇಶ್ವರ,ಶ್ರೀ ಕಲಮ್ಮೇಶ್ವರ ಹಾಗೂ ಶ್ರೀ ಬ್ರಹ್ಮದೇವರ ಜಾತ್ರಾ ಮಹೋತ್ಸವವು ಇದೇ ಮಾರ್ಚ 14…
Read More »