Kannada NewsKarnataka NewsLatestPolitics

*ಬಾಲವಿಕಾಸ ಅಕಾಡೆಮಿ ವತಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹುಟ್ಟುಹಬ್ಬ ಆಚರಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಜಯನಗರದಲ್ಲಿರುವ ಅಂಗನವಾಡಿ ಕೇಂದ್ರದ ಮಕ್ಕಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಸಂಗಮೇಶ ಬಬಲೇಶ್ವರ್, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ದೇವರು ಇನ್ನೂ ಹೆಚ್ಚಿನ ಆಯುಷ್ಯ, ಆರೋಗ್ಯ, ಅಧಿಕಾರ, ಸಂಪತ್ತು, ಸಂತೋಷವನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುವೆ ಎಂದರು.‌

Home add -Advt

ಇದೇ ವೇಳೆ ಮಕ್ಕಳಿಗೆ ಕುಡಿಯುವ ನೀರಿನ ಸ್ಟೀಲ್ ಬಾಟಲ್ ಗಳನ್ನು ವಿತರಿಸಿ, ಸಿಹಿ ಹಂಚಲಾಯಿತು. ‌‌ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button