Kannada NewsKarnataka NewsLatest

*ಶರಣಾದ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಸರ್ಕಾರದ ಮುಂದೆ ಶರಣಾದ 6 ಮಂದಿ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಕೊಪ್ಪ ತಾಲೂಕಿನ ಮೇಗೂರು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಚಿಕ್ಕಮಗಳು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗೂರು ಅರಣ್ಯ ಪ್ರದೇಶದಲ್ಲಿ ಗುಂಡಿ ತೋಡಿ ನಕ್ಸಲರು ಶಸ್ತ್ರಾಸ್ತ್ರಗಳನ್ನು ಮುಚ್ಚಿಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕಾರ್ಯಾಚರಣೆ ನಡೆಸಿದ ಕೊಪ್ಪ ಪೊಲೀಸ್ ರ ತಂಡ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಿದೆ ಎಂಬ ಮಾಹಿತಿ ಲಭ್ಯವಾಗಿದೆ.

Home add -Advt

ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ 6 ನಕ್ಸಲರು ಜ.8ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಪರಮೇಶ್ವರ್ ಸಮ್ಮುಖದಲ್ಲಿ ಶರಣಾಗತರಾಗಿದ್ದರು. 6 ನಕ್ಸಲರನ್ನು ಎನ್ ಐಎ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 6 ನಕ್ಸಲರಿಗೂ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. 

ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಎಂಬ ನಕ್ಸಲರು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.

Related Articles

Back to top button