Karnataka News
-
*ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಯುಕೆಪಿ 3ನೇ ಹಂತಕ್ಕೆ ತಕರಾರು ಎತ್ತಿರುವ ಹಾಗೂ ತುಂಗಭದ್ರಾ ಅಣೆಕಟ್ಟಿನ ನೀರು ಪೋಲು ತಡೆಯಲು ಸಹಕಾರ ನೀಡದಿರುವ…
Read More » -
*3.23 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಪೂಜೆ ನೆರವೇರಿಸಿ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುವೆಂಪು ನಗರದ ಕೆ.ಎಲ್.ಇ ಇಂಟರ್ನ್ಯಾಷನಲ್ ಸ್ಕೂಲ್ ನ ಮುಖ್ಯ ರಸ್ತೆ ಹಾಗೂ ಜಯನಗರದ ಪ್ರಮುಖ ರಸ್ತೆಗಳ ನಿರ್ಮಾಣಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳು…
Read More » -
*ನಾನು ಮಾಡುತ್ತಿರುವುದು ನಿಜವಾದ ಹಿಂದುತ್ವದ ಕೆಲಸ : ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಎಲ್ಲ ಜಾತಿ, ಜನಾಂಗಗಳನ್ನು ಒಟ್ಟುಗೂಡಿಸಿಕೊಂಡು, ಕ್ಷೇತ್ರದಲ್ಲಿ ನೂರಾ ಐವತ್ತಕ್ಕೂ ಹೆಚ್ಚು ದೇವಸ್ಥಾನಗಳನ್ನು ನಿರ್ಮಾಣ ಮಾಡಿ ಸರ್ವ ರೀತಿಯಿಂದಲೂ ಕ್ಷೇತ್ರದ ಅಭಿವೃದ್ಧಿ…
Read More » -
*ತಂದೆಯ ಅಂತ್ಯಸಂಸ್ಕಾರವನ್ನು ನೆರವೇರಿಸಿ ಸಮಾನತೆ ಮೆರೆದ ಇಬ್ಬರು ಹೆಣ್ಣುಮಕ್ಕಳು*
ಪ್ರಗತಿವಾಹಿನಿ ಸುದ್ದಿ: ಪುರುಷ ಪ್ರಧಾನ ಸಮಾಜದಲ್ಲಿ ಗಂಡು ಮಕ್ಕಳಿಲ್ಲದಿದ್ದರೆ ಮುಕ್ತಿ ದಿಒರೆಯುವುದಿಲ್ಲ ಎಂಬ ಮಾತುಗಳಿವೆ. ಇಂತಹ ಮೂಢನಂಬಿಕೆ, ಸಂಪ್ರದಾಯದ ನಂಬಿಕೆಗಳನ್ನು ಬದಿಗಿಟ್ಟು ಇಬ್ಬರು ಹೆಣ್ಣು ಮಕ್ಕಳು ತಮ್ಮ…
Read More » -
*ಲಿವ್ ಇನ್ ಗೆಳತಿಯನ್ನೇ ಕೊಲೆಗೈದ ವಿವಾಹಿತ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: ವಿವಾಹಿತ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿದ್ದು ಅಲ್ಲದೇ ಲಿವ್ ಇನ್ ಗೆಳತಿಯನ್ನು ವೈರ್ ನಿಂದ ಕತ್ತು ಬಿಗಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ…
Read More » -
*ಜಿಲ್ಲಾಧಿಕಾರಿ, ಎಡಿಸಿ ಸಹಿ ದುರುಪಯೋಗ: ನಕಲಿ ಬಿಲ್ ಸೃಷ್ಟಿಸಿದ ಐವರು ನೌಕರರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಅಧಿಕಾರಿಗಳ ಡಿಜಿಟಲ್ ಸಹಿ ದುರುಪಯೋಗ ಮಾಡಿ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಈ ಘಟನೆ ನಡೆದಿದೆ. ಜಿಲ್ಲಾಧಿಕಾರಿ ಹಾಗೂ…
Read More » -
*ಬಿಸಿಗಾಳಿ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಬಿರು ಬೇಸಿಗೆ ಅಬ್ಬರ ಜೋರಾಗಿದ್ದು, ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟಕ್ಕೆ…
Read More » -
*ಲೋಕಾಯುಕ್ತ ಬಲೆಗೆ ಬಿದ್ದ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ಮೌಲ್ಯದ ಆಸ್ತಿ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ…
Read More » -
*ಸಾಂಬ್ರಾ ಗ್ರಾಮದಲ್ಲಿ ನೂತನ ಬೀದಿ ದೀಪ ಹಾಗೂ ನಾಮಫಲಕ ಉದ್ಘಾಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮೀಣ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆಯಾಗಿ ಸಾಂಬ್ರಾ ಗ್ರಾಮದಲ್ಲಿ ನೂತನವಾಗಿ ಅಳವಡಿಸಲಾಗಿರುವ ಬೀದಿ ದೀಪಗಳು ಹಾಗೂ “ಐ ಲವ್ ಸಾಂಬ್ರಾ” ಎನ್ನುವ ನಾಮಫಲಕವನ್ನು ಮಹಿಳಾ…
Read More » -
*ಕಾನೂನುವ್ಯಾಸಂಗಕ್ಕೆಅಣಕುನ್ಯಾಯಾಲಯಸ್ಪರ್ಧೆಅಡಿಪಾಯ : ಜ್ಯೋತಿ ಎಂ.*
ಬೆಳಗಾವಿ ಆರ್.ಎಲ್.ಕಾನೂನು ಮಹಾವಿದ್ಯಾಲಯದಲ್ಲಿ ಅಣಕು ನ್ಯಾಯಾಲಯ ಸ್ಪರ್ಧೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿದ್ಯಾರ್ಥಿಗಳಿಗೆ ಅಣಕು ನ್ಯಾಯಾಲಯ ಸ್ಪರ್ಧೆ ಶೈಕ್ಷಣಿಕ ಚಟುವಟಿಕೆಗಿಂತ ಹೆಚ್ಚಿನದ್ದಾಗಿದೆ. ಇದು ಕಾನೂನು ಶಿಕ್ಷಣಕ್ಕೆ ಅಡಿಪಾಯವಾಗಿದೆ ಎಂದು ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಜ್ಯೋತಿ ಎಂ.ಹೇಳಿದರು. ಶುಕ್ರವಾರ ನಗರದ ಕೆಎಲ್ ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ 16 ನೇ ಎಂ.ಕೆ.ನಂಬಿಯಾರ್ ಸ್ಮಾರಕ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಅಣಕು ನ್ಯಾಯಾಲಯ ಸ್ಪರ್ಧೆ ಕೇವಲ ಕಾನೂನು ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿರದೆ ಭವಿಷ್ಯದ ಜೀವನಕ್ಕೂ ಅತ್ಯಂತ ಮಹತ್ವದಾಗಿದೆ. ವಾದವು ಚಿಕ್ಕದಾಗಿರಬೇಕು, ಸಂಕ್ಷಿಪ್ತವಾಗಿರಬೇಕು. ಕೆಲವೇ ಪದಗಳಲ್ಲಿ ಹೇಳಬೇಕು ಮತ್ತು ಸಂಕೀರ್ಣ ಸಮಸ್ಯೆಗಳನ್ನು ವ್ಯಕ್ತಪಡಿಸುವ ಸಾಮರ್ಥ್ಯ ಇರಬೇಕು ಎಂದು ಅವರು ಸಲಹೆ ನೀಡಿದರು. ನ್ಯಾಯಾಲಯದ ಶಿಷ್ಟಾಚಾರಗಳು, ಪೀಠದ ಮೇಲಿನ ಗೌರವವೂ ಅಷ್ಟೇ ಮುಖ್ಯ ಎಂದು ಅವರು ಹೇಳಿದರು. ನ್ಯಾಯವಾದಿ ಮತ್ತು ಕೆಎಲ್ಎಸ್ ಸೊಸೈಟಿ ಕಾರ್ಯದರ್ಶಿ ಎಸ್.ವಿ.ಗಣಾಚಾರಿ ಮಾತನಾಡಿ, ಅಣಕು ನ್ಯಾಯಾಲಯ ಸ್ಪರ್ಧೆ ಕಾನೂನು ಶಿಕ್ಷಣದಲ್ಲಿ ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಏಕೆಂದರೆ ಪಠ್ಯ ಪುಸ್ತಕವು ನಮಗೆ ಸೈದ್ಧಾಂತಿಕ ವಿಷಯವನ್ನು ಮಾತ್ರ ಕಲಿಸುತ್ತದೆ. ಅದರೆ, ಅಣಕು ನ್ಯಾಯಾಲಯ ಸ್ಪರ್ಧೆ ವಿದ್ಯಾರ್ಥಿಗಳಿಗೆ ಕಾನೂನು ಶಿಕ್ಷಣದ ಪ್ರಾಯೋಗಿಕ ಶಿಕ್ಷಣವನ್ನು ಅಭ್ಯಾಸ ಮಾಡಲು ವೇದಿಕೆಯನ್ನು ಒದಗಿಸುತ್ತದೆ. ಇದು ವಿದ್ಯಾರ್ಥಿಗಳು ಸಂಶೋಧನೆ, ವಕಾಲತ್ತು, ಸಾರ್ವಜನಿಕವಾಗಿ ಮಾತನಾಡುವ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಕೆಎಲ್ಎಸ್ ಸೊಸೈಟಿ ಅಧ್ಯಕ್ಷ ಪ್ರದೀಪ್ ಎಸ್. ಸಾವ್ಕರ್ ಮಾತನಾಡಿ, ವಿದ್ಯಾರ್ಥಿಯ ವೃತ್ತಿಜೀವನದಲ್ಲಿ ವಾದ ಮಂಡನೆ ಬಹಳ ಮುಖ್ಯ. ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಭಾಗವಹಿಸುವುದು, ಜತೆಗೆ ಇಂಟರ್ನ್ಶಿಪ್ ಕಾನೂನು ವಿದ್ಯಾರ್ಥಿಗಳಿಗೆ ದೀರ್ಘಾವಧಿಯಲ್ಲಿ ಸಹಾಯ ಮಾಡುತ್ತದೆ. ಇದು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತದೆ. ವಿದ್ಯಾರ್ಥಿಗಳನ್ನು ಓದಲು, ಸಂಶೋಧನೆ ಮಾಡಲು ಮತ್ತು ಕೆಲಸ ಮಾಡಲು ಪ್ರೇರಣೆ ಉಂಟುಮಾಡುತ್ತದೆ. ವಿದ್ಯಾರ್ಥಿಗಳು ನ್ಯಾಯಾಲಯದ ವಿಚಾರಣೆಗಳಿಗೆ ಹಾಜರಾಗಲು ಉಪಯುಕ್ತವಾಗುತ್ತದೆ ಎಂದು ಹೇಳಿದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ನ್ಯಾಯವಾದಿ ಆರ್.ಎಸ್. ಮುತಾಲಿಕ್ ಅವರು ಕಾಲೇಜಿನ ಪರಂಪರೆ ಮತ್ತು ವಿದ್ಯಾರ್ಥಿಗಳ ಸಾಧನೆಗಳ ಬಗ್ಗೆ ವಿವರಿಸಿದರು.ಅಣಕು ನ್ಯಾಯಾಲಯ ಸ್ಪರ್ಧೆಯ ಸಂಯೋಜಕಿ ಹಾಗೂ ಪ್ರಾಧ್ಯಾಪಕಿ ಪ್ರೊ.ಅಶ್ವಿನಿ ಪರಬ್ ಅವರು ಸ್ಪರ್ಧೆಯ ನಿಯಮದ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು. ವಿಜೇತರಿಗೆ ರೂ.50,000 ನಗದು ಮತ್ತು ಟ್ರೋಫಿ, ರನ್ನರ್ ಅಪ್ ತಂಡಕ್ಕೆ ಟ್ರೋಫಿ ಮತ್ತು ರೂ.30,000 ನಗದು ಬಹುಮಾನ, ಅತ್ಯುತ್ತಮ ಪುರುಷ ಸ್ಪರ್ಧಿಗೆ ರೂ. 15,000 ರೂಪಾಯಿ ನಗದು, ಅತ್ಯುತ್ತಮ ಮಹಿಳಾ ಸ್ಪರ್ಧಿಗೆ ರೂ.15,000 ರೂಪಾಯಿ ನಗದು, ಅತ್ಯುತ್ತಮ ಸ್ಮಾರಕ ಪ್ರಶಸ್ತಿ ಅಥವಾ ರೂ.15,000 ರೂಪಾಯಿ ನಗದು, ಮತ್ತು ಅತ್ಯುತ್ತಮ ಸಂಶೋಧಕರಿಗೆ ರೂ.10,000 ರೂಪಾಯಿ ನಗದು ಮತ್ತು ಅತ್ಯುತ್ತಮ ಸ್ಪರ್ಧಿಗೆ ಅಶೋಕ್ ಎನ್ ಪೋತದಾರ ಹೆಸರಿನ ಬೆಸ್ಟ್ ಮೂಟರ್ ಸ್ಪರ್ಧಿಗೆ ರೂ. 6,050 ನಗದು ಬಹುಮಾನ ನೀಡಲಾಗುತ್ತದೆ. ಈ ಸಮಾರಂಭವನ್ನು ಕಾಲೇಜಿನ ಮೂಟ್ ಕೋರ್ಟ್ ವಿಭಾಗ ಆಯೋಜಿಸಿತ್ತು. ಕೆಎಲ್ಎಸ್ ಸೊಸೈಟಿ ಚೇರ್ಮನ್ ಹಾಗೂ ನ್ಯಾಯವಾದಿ ಎ.ಕೆ.ಟಗಾರೆ, ಕಾರ್ಯದರ್ಶಿ ವಿ.ಎಂ. ದೇಶಪಾಂಡೆ, ಪ್ರಾಚಾರ್ಯ ಡಾ. ಎ.ಎಚ್.ಹವಾಲ್ದಾರ್, ಅಣಕು ನ್ಯಾಯಾಲಯ ಸ್ಪರ್ಧೆಯ ಸಂಯೋಜಕಿ ಸುನಿಧಿ ಜೋಶಿ, ಕಾಲೇಜಿನ ವಿದ್ಯಾರ್ಥಿ ಪ್ರಧಾನ ಕಾರ್ಯದರ್ಶಿ ತನ್ಮಯಿ ಸರಾಫ್ ಮತ್ತು ಮಹಿಳಾ ಪ್ರತಿನಿಧಿ ಚಂದ್ರಲೇಖಾ ಪಾಟೀಲ, ಎಲ್ಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. Belagavi: Inauguration of the…
Read More »