Karnataka News

*ಮನೆ ಮೇಲೆ ಗುಡ್ದ ಕುಸಿತ: ರಕ್ಷಿಸಲ್ಪಟ್ಟ ಮಗು ಆಸ್ಪತ್ರೆ ಮಾರ್ಗಮಧ್ಯೆಯೇ ಸಾವು: ಒಂದೇ ಕುಟುಂಬದ ಮೂವರು ಬಲಿ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣರಭಟಕ್ಕೆ ಉಳ್ಳಾಲದಲ್ಲಿ ಮನೆ ಮೇಲೆ ಗುಡ್ದ ಕುಸಿದು ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

Related Articles
Home add -Advt

ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದಿತ್ತು. ದುರಂತದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿ ಅಜ್ಜಿ-ಮೊಮ್ಮಗ ಸಾವನ್ನಪ್ಪಿದ್ದರು. ಮಣ್ಣಿನಡಿ ಸಿಲುಕಿದ್ದ ತಾಯಿ ಹಾಗೂ ಮಗುವನ್ನು ರಕ್ಷಿಸಲಾಗಿತ್ತು. ಆದರೆ ಮಗು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದೆ.

ಮಗುವಿನ ತಾಯಿ ಅಶ್ವಿನಿ ಇಬ್ಬರು ಮಕ್ಕಳನ್ನು ಕಳೆದುಕೊಂಡಿದ್ದು, ಅವರ ಸ್ಥಿತಿ ಕೂಡ ಗಂಭೀರವಾಗಿದೆ. ಗಾಯಾಳು ಅಶ್ವಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಡ್ದ ಕುಸಿತದಲ್ಲಿ ಕಾಂತಪ್ಪ ಪೂಜಾರಿ ಪತ್ನಿ ಪ್ರೇಮಾ ಪೂಜಾರಿ (58) ಹಾಗೂ ಮೊಮ್ಮಕ್ಕಳಾದ ಆರ್ಯನ್, ಆರುಷ್ ಸೇರಿ ಮೂವರು ಸಾವನ್ನಪ್ಪಿದ್ದಾರೆ.


Related Articles

Back to top button