Latest

ಕುತೂಹಲ ಮೂಡಿಸಿದ ರಾಜ್ಯಸಭಾ ಚುನಾವಣೆ; ಮತದಾನ ಪ್ರಕಿಯೆ ಆರಂಭ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತೀವ್ರ ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿರುವ ರಾಜ್ಯಸಭಾ 4 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತಿದ್ದು, ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ವಿಧಾನಸೌಢದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಕೋವಿಡ್ ನಿಯಮಗಳನ್ನು ಪಾಲಿಸಿ ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಿರುವ ಮತದಾನ ಸಂಖ್ಯೆ 4 ಗಂಟೆಯವರೆಗೆ ನಡೆಯಲಿದೆ. 224 ಸದಸ್ಯರು ಮತ ಚಲಾಯಿಸಲಿದ್ದಾರೆ. ಬಳಿಕ ಸಂಜೆ 5-6 ಗಂಟೆವರೆಗೆ ಮತ ಎಣಿಕೆ ನಡೆಯಲಿದ್ದು, ನಂತರ ಫಲಿತಾಂಶ ಪ್ರಕಟವಾಗಲಿದೆ.

Home add -Advt

ಬಿಜೆಪಿಯಿಂದ ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಹಾಗೂ ಲೆಹರ್ ಸಿಂಗ್ ಕಣದಲ್ಲಿದ್ದು ಮೂರು ಅಭ್ಯರ್ಥಿಗಳು ಗೆಲ್ಲುವ ಭರವಸೆ ಬಿಜೆಪಿಯದ್ದಾಗಿದೆ. ನಾಲ್ಕನೇ ಸ್ಥಾನ ಕಾಂಗ್ರೆಸ್ ಪಾಲಾಗಲಿದೆಯೇ ಅಥವಾ ಜೆಡಿಎಸ್ ಪಾಲಾಗುತ್ತಾ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಪ್ರಧಾನ ಮಂತ್ರಿಯವರ ರಾಜ್ಯ ಪ್ರವಾಸ: ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ ಪ್ರಧಾನಿ ಮೋದಿ

Related Articles

Back to top button