Karnataka NewsPolitics
*ಸಂಪುಟ ಸಚಿವರಿಗೆ ಉಪಹಾರ ಕೂಟ ಆಯೋಜನೆ; ಕುತೂಹಲ ಮೂಡಿಸಿದ ಸಿಎಂ ಸಭೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದ ಸಹೊದ್ಯೋಗಿಗಳಿಗೆ ಉಪಹಾರ ಕೂಟ ಆಯೋಜಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಂಪುಟದ ಎಲ್ಲಾ ಸಚಿವರಿಗೆ ಉಪಹಾರ ಕೂಟ ಆಯೋಜಿಸಿದ್ದು, ಸಿಎಂ ನಡೆ ಸಾಕಷ್ಟು ಕುತೂಹಲ ಮೂಡಿಸಿದೆ.
ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಜೆ.ಜಾರ್ಜ್, ರಾಜಣ್ಣ, ಮಂಕಾಳು ವೈದ್ಯ, ಎಂ.ಬಿ.ಪಾಟೀಲ್, ಮಧು ಬಂಗಾರಪ್ಪ ಸೇರಿದಂತೆ ಎಲ್ಲಾ ಸಚಿವರು ಭಾಗವಹಿಸಿದ್ದಾರೆ.




