LatestPolitics

*ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದ ಕಾವೇರಿ 5 ನೇ ಹಂತದ ಕಾಮಗಾರಿಗಳ ಪ್ರಗತಿ ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರದ ಸುಮಾರು 50 ಲಕ್ಷ ಜನರಿಗೆ ಶುದ್ದ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷೆ ಯೋಜನೆ ಕಾವೇರಿ 5 ನೇ ಹಂತದ ಕಾಮಗಾರಿ ಬಹುತೇಕ ಅಂತಿಮಗೊಂಡಿದೆ. ಈ ಕಾಮಗಾರಿ ಉದ್ಘಾಟನೆಗೆ ಸಿದ್ದವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸೆಪ್ಟೆಂಬರ್ 23(ಸೋಮವಾರ)ರಂದು ವಿವಿಧೆಡೆ ಭೇಟಿ ನೀಡಿ ಪರಿಶೀಲನೆ‌ ನಡೆಸಲಿದ್ದಾರೆ.

ಕಾರ್ಯಕ್ರಮದ ಪಟ್ಟಿ ಹೀಗಿದೆ:

1) ಬೆಂಗಳೂರು ಜಲಮಂಡಳಿ ಕಚೇರಿಯಿಂದ ಹೊರಡಲಿರುವ ಉಪಮುಖ್ಯಮಂತ್ರಿಗಳು ಮೊದಲಿಗೆ ಕೃಷ್ಣಪ್ರಿಯ ಕಲ್ಯಾಣ ಮಂಟಪ,ಕೆಂಗೇರಿಯಲ್ಲಿ‌ ಚಾಲನೆಯಲ್ಲಿರುವ ಬೃಹತ್ ಕೊಳವೆ ಮಾರ್ಗದ ಕಾಮಗಾರಿಯ ಪರಿವೀಕ್ಷಣೆ ನಡೆಸಲಿದ್ದಾರೆ

2) ಕನಕಪುರ ತಾಲೂಕಿನ ಹಾರೋಹಳ್ಳಿಯ 05ನೇ ಹಂತದ ಜಲರೇಚಕ ಯಂತ್ರಗಾರದ ಪರಿವೀಕ್ಷಣೆ

Home add -Advt

3) ಮಳವಳ್ಳಿ ಸಮೀಪದ ತೊರೆಕಾಡನಹಳ್ಳಿಯ ಕಾವೇರಿ 05ನೇ ಹಂತದ ಜಲಶುದ್ಧೀಕರಣ ಘಟಕ ಮತ್ತು ಜಲರೇಚಕ ಯಂತ್ರಗಾರದ ಪರಿವೀಕ್ಷಣೆ ನಡೆಸಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button