Kannada NewsKarnataka NewsLatest

ನಿಂಬಾಳಕರ್, ಅಜಯ್ ಹಿಲೋರಿ ಮನೆ ಸೇರಿ 15 ಕಡೆ ಸಿಬಿಐ ದಾಳಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -ಬಹುಕೋಟಿ ವಂಚನೆ ಪ್ರಕರಣ ಐಎಂಎ ಹಗರಣದ ಹಿನ್ನೆಲೆಯಲ್ಲಿ ಸಿಬಿಐ 15 ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದೆ. ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ ನಿಂಬಾಳಕರ್, ಅಜಯ್ ಹಿಲೋರಿ ಸೇರಿದಂತೆ ಹಲವರ ಮನೆ ಮೇಲೆ ದಾಳಿ ನಡೆಸಲಾಗಿದೆ.

ಐಎಂಎ ವಂಚನೆ ಪ್ರಕರಣದಲ್ಲಿ ಈ ಹಿಂದೆ ತನಿಖೆ ನಡೆಸಿ ಕ್ಲೀನ್ ಚಿಟ್ ನೀಡಿದ ಆರೋಪ ಈ ಅಧಿಕಾರಿಗಳ ಮೇಲಿದೆ. ರಾಜ್ಯದ ವಿವಿಧೆಡೆ ಇರುವ ಸಂಬಂಧಿಸಿದ ಅಧಿಕಾರಿಗಳ ಮನೆಗಳ ಮೇಲೂ ದಾಳಿ ನಡೆಸಲಾಗುತ್ತಿದೆ.

ಈಗಷ್ಟೆ ದಾಳಿ ನಡೆದಿದ್ದು, ವಿಚಾರಣೆ ಮುಂದುವರಿದಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button