Latest

ಸಿಡಿ ಯುವತಿ ಜೊತೆ ಮಾಜಿ ಸಚಿವರ ನಂಟು; ಸ್ಫೋಟಕ ಮಾಹಿತಿ ಬಹಿರಂಗ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಸಿಡಿ ಯುವತಿ ಜೊತೆ ಮಾಜಿ ಸಚಿವ ಡಿ.ಸುಧಾಕರ್ ನಂಟಿದೆ ಎಂಬ ವಿಷಯ ಇದೀಗ ಚರ್ಚೆಗೆ ಕಾರಣವಾಗಿದೆ.

ಸಿಡಿ ಯುವತಿ ಸುಧಾಕರ್ ಜೊತೆ ನಿರಂತರ ಫೋನ್ ಸಂಪರ್ಕದಲ್ಲಿದ್ದರು. ಅಲ್ಲದೇ ಸಿಡಿ ಬಿಡುಗಡೆಗೂ ಎರಡು ದಿನ ಮೊದಲು ಯುವತಿ ಬಳಿ ಡಿ.ಸುಧಾಕರ್ ಹಣದ ವ್ಯವಹಾರ ನಡೆಸಿರುವ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಮೂಲದ ಮಾಜಿ ಸಚಿವ ಡಿ.ಸುಧಾಕರ್ ಅವರಿಗೆ ಎಸ್ ಐಟಿ ನೋಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆ ದಟ್ಟವಾಗಿದೆ.

ಹನಿಟ್ರ್ಯಾಪ್ ಬಗ್ಗೆ ಡಿ.ಸುಧಾಕರ್ ಬಾಯ್ಬಿಟ್ಟ ಸತ್ಯವೇನು?

Home add -Advt

Related Articles

Back to top button