Latest

ಸಿಡಿ ಪ್ರಕರಣ; ನಾನು ಮೊದಲೇ ಹೇಳಿಲ್ವಾ ಎಂದ ಹೆಚ್.ಡಿ.ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇದು 5 ಕೋಟಿ ವ್ಯವಹಾರ ಎಂದು ನಾನು ಮೊದಲ ದಿನವೇ ಹೇಳಿದ್ದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನರೇಶ್ ಎಂಬ ಹುಡುಗನ ಬಗ್ಗೆಯೂ ನಾನು ಪ್ರತಿಕ್ರಿಯಿಸಿದ್ದೆ. ಈಗ ಒಂದೊಂದಾಗಿ ಹೊರಬರುತ್ತಿದೆ. ಆದರೆ ಈ ಪ್ರಕರಣದ ಮಹಾ ನಾಯಕ ಯಾರು ಎಂಬುದು ಮಾತ್ರ ನನಗೆ ಗೊತ್ತಿಲ್ಲ ಎಂದರು.

ನನಗೂ ಹಲವು ಮೂಲಗಳಿಂದ ಎಲ್ಲ ರೀತಿಯ ಮಾಹಿತಿ ಸಿಗುತ್ತೆ. ನನ್ನ ತಂದೆ 70 ವರ್ಷ ರಾಜಕೀಯ ಮಾಡಿದವರು ಎಂಬುದು ನೆನಪಿರಲಿ. ಸಮಯ ಬಂದಾಗ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದು ಹೇಳಿದರು.

Home add -Advt

Related Articles

Back to top button