National

*ಸೇನೆಯ ಕಾರ್ಯಾಚರಣೆ ನೇರಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಕೇಂದ್ರ ಸೂಚನೆ*

ಪ್ರಗತಿವಾಹಿನಿ ಸುದ್ದಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ 26 ಜನರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸದ್ಯ ಜಮ್ಮು -ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕುವ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ತೊಡಗಿದೆ. ಈ ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲನಗಳನ್ನು ನೇರಪ್ರಸಾರ ಮಾಡಬೇದಂತೆ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ರಾಷ್ಟ್ರೀಯ ಭದ್ರತೆ ಹಿತಾಸಕ್ತಿಯಲ್ಲಿ ಸೋಷಿಯಲ್‌ ಮೀಡಿಯಾಗಳು ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲನಗಳ ನೇರಪ್ರಸಾರ ಮಾಡಬಾರದು ಎಂದು ಸಲಹೆ ನೀಡಿದೆ.

ವರದಿ ಮಾಡುವಾಗ ಅಸ್ತಿತ್ವದಲ್ಲಿನ ಕಾನೂನು, ನಿಬಂಧನೆಗಳಿಗೆ ಬದ್ಧವಾಗಿರಬೇಕು. ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರವನ್ನು ಮಾಡದಂತೆ ಎಲ್ಲಾ ಮಾಧ್ಯಮ ಚಾನೆಲ್ ಗಳಿಗೆ ಸಲಹೆ ನೀಡಿದೆ.

Home add -Advt

Related Articles

Back to top button