Belagavi NewsBelgaum NewsKarnataka News

*ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳ ಜವಿವಾರ ತೆಗೆಸಿದ ಪ್ರಕರಣ: ಬೆಳಗಾವಿಯಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ; ಆಕ್ರೋಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿಇಟಿ ಪರೀಕ್ಷೆಗೆ ತೆರಳಿದ್ದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ ಅವಮಾನ ಮಾಡಿದ ಪ್ರಕರಣ ಖಂಡಿಸಿ ಬೆಳಗಾವಿಯಲ್ಲಿ ಇಂದು ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ , ಸಾಗರ, ಧಾರವಾಡ ಹಾಗೂ ಬೀದರ್ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಜನಿವಾರವನ್ನು ತೆಗೆದು ಹಾಕಲು ಸೂಚಿಸಿದ ಹಾಗೂ ಜನಿವಾರ ಕತ್ತರಿಸಿದ ಘಟನೆ ಸಂಭವಿಸಿದ್ದು, ಇದು ನಮ್ಮ ಧಾರ್ಮಿಕ ಭಾವನೆಗಳಿಗೆ ಹಾಗೂ ಸಂಪ್ರದಾಯಗಳಿಗೆ ಆಘಾತ ತರುವಂತಹದ್ದು. ಘಟನೆ ಖಂಡಿಸಿ ಬ್ರಾಹ್ಮಣ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Home add -Advt

ಚನ್ನಮ್ಮ ಸರ್ಕಲ್ ನಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ವಿದ್ಯಾರ್ಥಿಗಳಿಗೆ ನ್ಯಾಯಕೊಡಿಸುವಂತೆ ಒತ್ತಾಯಿಸಿದರು.
ಬಳಿಕ ಚನ್ನಮ್ಮ ಸರ್ಕಲ್ ನಿಂದ ಡಿಸಿ ಕಚೇರಿವರೆಗೆ ತೆರಳಿ, ಮನವಿ ಸಲ್ಲಿಸಲಾಯಿತು.

Related Articles

Back to top button