Wanted Tailor2
Cancer Hospital 2
Bottom Add. 3

*ಭಾರಿ ಮಳೆ: ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿಮೆ ಬಳಿ ಭೂ ಕುಸಿತ*

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ವರುಣಾರ್ಭಟಕ್ಕೆ ಮಲೆಮಹದೇಶ್ವರ ಪ್ರತಿಮೆ ಬಳಿ ಭೂ ಕುಸಿತ ಉಂಟಾಗಿರುವ ಘಟನೆ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.

ಚಾಮರಾಜನಗರದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ 108 ಅಡಿ ಉದ್ದದ ಮಹದೇಶ್ವರ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದ್ದು, ಈ ವೇಳೆ ಪ್ರತಿಮೆ ಕೆಳಭಾಗದಲ್ಲಿ ಕಲ್ಲಿನ ತಡೆಗೋಡೆ ಕುಸಿದಿದೆ.

ಸದ್ಯ ಪ್ರತಿಮೆ ವೀಕ್ಷಣೆಗೆ ಭಕ್ತರಿಗೆ ಪ್ರಾಧಿಕಾರ ನಿರ್ಬಂಧಿಸಿದ್ದು, ತಡೆಗೋಡೆ ನಿರ್ಮಾಣಕ್ಕೆ ಕಾಮಗಾರಿ ನಡೆಸುತ್ತಿದೆ.


Bottom Add3
Bottom Ad 2

You cannot copy content of this page