Election NewsKannada NewsKarnataka NewsPolitics

ಜೂ.9ರಂದು ಆಂಧ್ರದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ: ಆಂದ್ರ ಪ್ರದೇಶದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ವೈಎಸ್​​ಆರ್​​​ಪಿ ಪಕ್ಷವು ಹೀನಾಯವಾಗಿ ಸೋಲನ್ನು ಕಂಡಿದೆ.

ಸೋಲಿನ ಹೊಣೆಹೊತ್ತಿರುವ ಸಿಎಂ ಜಗನ್​​ ಮೋಹನ್​​ ರೆಡ್ಡಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

2019ರ ವಿಧಾನಸಭಾ ಚುನಾವಣೆಯಲ್ಲಿ  ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ಪಕ್ಷವು 175 ಸ್ಥಾನಗಳಲ್ಲಿ 151 ಸ್ಥಾನಗಳನ್ನು ಗೆಲ್ಲುವ ಮೂಲಕ ಅದ್ಭುತ ವಿಜಯ ಸಾಧಿಸಿತ್ತು.

ಆದರೆ ಈ ಬಾರಿ ಆಂಧ್ರ ಪ್ರದೇಶದ ಒಟ್ಟು 175 ಕ್ಷೇತ್ರಗಳಲ್ಲಿ ವೈಎಸ್​​​​ಆರ್​​ಪಿ ಪಕ್ಷವು ಕೇವಲ 20 ಸ್ಥಾನಗಳಲ್ಲಿ ಗೆದ್ದಿದ್ದು, ಇನ್ನುಳಿದ ಸ್ಥಾನಗಳಲ್ಲಿ ಹೀನಾಯವಾಗಿ ಸೋಲುಂಡಿದೆ. ಅತ್ತ ಟಿಡಿಪಿ 130 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹೀಗಾಗಿ ಜೂ.9ರಂದು ಆಂಧ್ರ ಪ್ರದೇಶದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

Home add -Advt

Related Articles

Back to top button