CrimeKannada NewsKarnataka NewsPolitics

*ಶಾಸಕ ಭೈರತಿ ಬಸವರಾಜ್ ಸಿಐಡಿ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಶಾಸಕ ಬೈರತಿ ಬಸವರಾಜ್ ಗೆ ಚಿಕಿತ್ಸೆ ಬಳಿಕ ಸಿಐಡಿ ಅಧಿಕಾರಿಗಳು ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆಗೆ ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರು ಭೈರತಿ ಬಸವರಾಜ್ ರನ್ನು  7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೋರಡಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಜಯದೇವ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಪರೀಕ್ಷೆಗಳಿಗೆ ಒಳಗಾಗಿದ್ದ ಭೈರತಿ ಬಸವರಾಜ್‌ ಅವರನ್ನು ಹಾಜರುಪಡಿಸುವಂತೆ ನ್ಯಾಯಾಧೀಶರು ಈ ಹಿಂದೆ ಸೂಚಿಸಿದ್ದರು. ಅದರಂತೆ, ಇಂದು ಅವರನ್ನು ಜನಪ್ರತಿನಿಧಿಗಳ ವಿಶೇಷ 42ನೇ ಎಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

Home add -Advt

ಈ ವೇಳೆ, ಜಯದೇವ ಆಸ್ಪತ್ರೆಯಲ್ಲಿ ನಡೆಸಲಾದ ಹೃದಯ ಸಂಬಂಧಿ ಆಂಜಿಯೋಗ್ರಾಮ್ ತಪಾಸಣಾ ವರದಿಯನ್ನು ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್ ಮೂಲಕ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದರು.

ವರದಿ ಪರಿಶೀಲಿಸಿದ ನ್ಯಾಯಾಧೀಶರು, ಶಾಸಕ ಭೈರತಿ ಬಸವರಾಜ್‌ರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದರು. ನ್ಯಾಯಾಧೀಶರು ಆರೋಪಿ ಬಸವರಾಜ್‌ರನ್ನು ಫೆಬ್ರವರಿ 21, 2026ರ ಶನಿವಾರದವರೆಗೆ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೋರಡಿಸಿದ್ದಾರೆ.

Related Articles

Back to top button