Belagavi NewsBelgaum NewsKannada NewsKarnataka NewsLatest

ಚಂದ್ರಯಾನ-3 ಯಶಸ್ವಿ ಉಡಾವಣೆ; ಇಸ್ರೋ ವಿಜ್ಞಾನಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹತ್ವಾಕಾಂಕ್ಷಿ ಚಂದ್ರಯಾನ-3 ಯಶಸ್ವಿ ಉಡಾವಣೆಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಸ್ರೋ ವಿಜ್ಞಾನಿಗಳ ತಂಡವನ್ನು ಅಭಿನಂದಿಸಿದ್ದಾರೆ.

ಚಂದ್ರಯಾನ-3 ಯಶಸ್ವಿ ಉಡಾವಣೆ ಇಡೀ ದೇಶಕ್ಕೆ ಐತಿಹಾಸಿಕ ಹಾಗೂ ಹೆಮ್ಮೆಯ ಕ್ಷಣ. ಈ ಮೂಲಕ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನೇ ತೆರೆದಿದೆ. ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಅಭಿನಂದನೆ ಎಂದು ತಿಳಿಸಿದ್ದಾರೆ.

ಚಂದ್ರಯಾನ ಪ್ರತಿಯೊಬ್ಬ ಭಾರತೀಯನ ಕನಸು. ಆ ಕನಸನ್ನು ನನಸಾಗಿಸುವಲ್ಲಿ ಇಸ್ರೋ ವಿಜ್ಞಾನಿಗಳ ಪರಿಶ್ರಮ ಶ್ಲಾಘನೀಯ. ಚಂದ್ರಯಾನ ಯಶಸ್ವಿ ಉಡಾವಣೆ ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲಾಗಲಿದೆ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button