Karnataka News

*ಚನ್ನಪಟ್ಟಣ ಉಪಚುನಾವಣೆ: ಸಿ.ಪಿ.ಯೋಗೇಶ್ವರ್ ಗೆ ಭರ್ಜರಿ ಗೆಲುವು*

ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟನ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಉಪಚುನವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಗೆದ್ದು ಬೀಗಿದೆ.

ಚನ್ನಪಟ್ಟಣ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. 22 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಸಂಡೂರು ಹಾಗೂ ಶಿಗ್ಗಂವಿಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಪಡೆದಿದ್ದಾರೆ. ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಹಾಗೂ ಶಿಗಾಂವಿಯಲ್ಲಿ ಯಾಸೀರ್ ಪಠಾಣ್ ಭರ್ಜರಿ ಗೆಲುವು ಪಡೆದುಕೊಂಡಿದ್ದಾರೆ.


Home add -Advt

Related Articles

Back to top button