Election NewsPolitics

*ಉಪಚುನಾವಣೆಗೆ ಇಂದೇ ದಿನಾಂಕ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮೂರು ಕ್ಷೇತ್ರಗಳಿಗೆ ಇಂದು ಉಪಚುನಾವಣೆ ದಿನಾಂಕ ಘೋಷಣೆಯಾಗಲಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಉಪಚುನಾವಣೆ ದಿನಾಂಕ ಘೋಷಣೆ ಮಾಡಲಿದೆ.

ಚನ್ನಪಟ್ಟಣ, ಸಂಡೂರ, ಶಿಗ್ಗಾವಿ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಇಂದು ಘೋಷಣೆಯಾಗಲಿದೆ. ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚೆನ್ನಪಟ್ಟಣ ಕ್ಷೇತ್ರ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರ ಹಾಗೂ ತುಕಾರಾಂ ಅವರಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೆ ಬೈ ಎಲೆಕ್ಷನ್ ನಡೆಯಲಿದೆ.

Home add -Advt

ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹೆಚ್.ಡಿ.ಕುಮರಸ್ವಾಮಿ, ಬಸವರಾಜ್ ಬೊಮ್ಮಾಯಿ ಹಾಗೂ ತುಕಾರಾಂ ರಾಜೀನಾಮೆಯಿಂದ ಈ ಕ್ಷೇತ್ರಗಳು ತೆರವಾಗಿವೆ.

Related Articles

Back to top button