Belagavi NewsBelgaum NewsKannada News

ಒಳಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿದ ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದ ರೆಹಮತ್ ನಗರದ ಒಳಚರಂಡಿ  ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳಕರ್ ಅವರು ಸಚಿವರಾಗಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಸಿಗಲಿದೆ. ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಮಾದರಿ ಕ್ಷೇತ್ರವಾಗಿಸುವ ನಮ್ಮ ಕನಸು ಖಂಡಿತ ಈಡೇರುತ್ತದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ರಾ ಪಾಟೀಲ, ಉಪಾಧ್ಯಕ್ಷರಾದ ಪುಷ್ಪಾವತಿ ನಾಯ್ಕರ್, ಸುರೇಶ ಇಟಗಿ, ನಿಂಗಪ್ಪ ತಳವಾರ, ಸಲೀಂ ಸತ್ತಿಗೇರಿ, ಸ್ವಾತಿ ಇಟಗಿ, ಗೌಸಮೊದ್ದಿನ್ ಜಾಲಿಕೊಪ್ಪ, ತಮ್ಮಣ್ಣ ಗಾಣಗಿ, ಅಶೋಕ ಬಾನಿಕಟ್ಟಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button