*ಚಾರ್ಮಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಚಾರ್ಮಡಿ ಘಾಟ್ ನಲ್ಲಿ ಲಾರಿಯೊಂದು 100 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಸೋಮನಕಾಡು ಬಳಿ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಸರಕು ಲಾರಿ ರಸ್ತೆಯಿಂದ ಪ್ರಪಾತಕ್ಕೆ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ಸಾಗಿಸುತ್ತಿದ್ದ ಲಾರಿ ಚಾಲಕನಿಗೆ ದಟ್ಟ ಮಂಜು ಹಾಗೂ ಮಳೆಯಿಂದಾಗಿ ದಾರಿ ಕಾಣದೇ ಈ ದುರಂತ ಸಂಭವಿಸಿದೆ. *ಹಳೆಯ … Continue reading *ಚಾರ್ಮಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ*