
ಪ್ರಗತಿವಾಹಿನಿ ಸುದ್ದಿ: ಫಾರೆಸ್ಟ್ ವಾಚರ್ ಮೇಲೆಯೇ ಹಾಡಹಗಲೇ ಚಿರತೆ ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಫಾರೆಸ್ಟ್ ವಾಚರ್ ಬಂಗಾರು ಎಂಬುವರು ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಗಾರು ಅವರ ಕತ್ತು, ತಲೆ, ಕೈಗಳಿಗೆ ಗಂಭೀರವಾದ ಗಾಯಗಳಾಗಿವೆ. ಬಂಗಾರು ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ.
ಯಡವನಹಳ್ಳಿ ಗ್ರಾಮದ ಬಳಿ ಚಿರತೆ ಮೇಕೆಯನ್ನು ಬಲಿಪಡೆದಿದ್ದು, ಘಟನಾ ಸ್ಥಳದಲ್ಲಿ ಕೂಂಬಿಂಗ್ ನಡೆಸಲು ಪರಿಶೀಲನಗೆಂದು ಬಂದಿದ್ದ ವೇಳೆ ಫಾರೆಸ್ಟ್ ವಾಚರ್ ಮೇಲೆಯೇ ಚಿರತೆ ದಾಳಿ ನಡೆಸಿದೆ.



