Kannada NewsKarnataka News

*ಲಂಚ ಸ್ವೀಕರಿಸುತ್ತಿದ್ದ ಮುಖ್ಯ ಇಂಜಿನಿಯರ್‌ ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ: ಕೆಲಸ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಮುಖ್ಯ ಇಂಜಿನಿಯರ್ ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. 

Home add -Advt

ಲೋಕಾಯುಕ್ತ ಎಸ್ ಪಿ ಕುಮಾರ ಚಂದ್ ಮಾರ್ಗದರ್ಶನದಲ್ಲಿ ಕಾರವಾರದ ಲೋಕಾಯುಕ್ತ ಇಸ್ಪೆಕ್ಟರ್ ವಿನಾಯಕ್ ಬಿಲ್ಲವ ರವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ವ್ಯಕ್ತಿಯೋರ್ವನಿಂದ 60 ಸಾವಿರ ಲಂಚ ಪಡೆಯುತ್ತಿರುವಾಗ ಹಣದ ಸಮೇತ ಹೊನ್ನಾವರದ ಪಟ್ಟಣ ಪಂಚಾಯತಿ ಮುಖ್ಯ ಇಂಜಿನಿಯರ್ ಪ್ರವೀಣ್‌ ಕುಮಾರ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಣದ ಸಮೇತ ಕಚೇರಿಯಲ್ಲಿ ವಶಕ್ಕೆ ಪಡೆದು ಹೊನ್ನಾವರ ಪಟ್ಟಣ ಪಂಚಾಯತಿ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲಿಸಿದ್ದಾರೆ. ಈ‌ ಸಂಬಂಧ ಕಾರವಾರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button