Kannada NewsKarnataka NewsLatest

*ವರದಕ್ಷಿಣೆ ಕಿರುಕುಳ: ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಗರ್ಭಿಣಿ*

ಪ್ರಗತಿವಾಹಿನಿ ಸುದ್ದಿ: ಗರ್ಭಿಣಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ವಂದನಾ (24) ಆತ್ಮಹತ್ಯೆಗೆ ಶರಣಾಗಿರುವ ಗರ್ಭಿಣಿ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಕೆರೆಯಲ್ಲಿ ಗರ್ಭಿಣಿ ಮೃತದೇಹ ಪತ್ತೆಯಾಗಿದೆ.

Home add -Advt

ಪತಿ ಹಾಗೂ ಕುಟುಂಬದವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಂದನಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ಪೋಷಕರು ದೂರಿದ್ದಾರೆ. ಒಂದೂವರೆ ವರ್ಷದ ಹಿಂದೆ ವಂದನಾ ಹಾಗೂ ರೂಪಿತ್ ಪ್ರೀತಿಸಿ ವಿವಾಹವಾಗಿದ್ದರು. ವಂದನಾ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದಳು. ನಾಲ್ಕು ದಿನಗಲ ಹಿಂದೆ ವಂದನಾ ಹಾಗೂ ಅತ್ತೆ ಮಂಜುಳಾ ನಡುವೆ ಜಗಳವಾಗಿತ್ತು. ಅಂದಿನಿಂದ ನಾಪತ್ತೆಯಾಗಿದ್ದ ಮಂಜುಳಾ ಇದೀಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button