
ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ತೊಗರಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸವಿತಾ ಹಾಗೂ ಮುನಿರಾಜು ದಂಪತಿಯ ಮಗಳು ದಕ್ಷ (11) ಹಾಗೂ ಆಶಾ- ಪ್ರದೀಪ್ ದಂಪತಿಯ ಮಗ ಧನುಷ್ (4) ಮೃತ ಮಕ್ಕಳು.
ಇಬ್ಬರು ಕೃಷಿ ಹೊಂಡದ ಬಳಿ ಆಟವಾಡಲು ತೆರಳಿದ್ದರು. ಈ ವೇಳೆ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ಸೂಕ್ತ ಬೇಲಿ ನಿರ್ಮಿಸದ ಕಾರಣ ಮಾಲೀಕ ಗುರುಮೂರ್ತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.




