Wanted Tailor2
Cancer Hospital 2
Bottom Add. 3

*ಉಪನ್ಯಾಸಕನ ವಿರುದ್ಧ ಕಿರುಕುಳ ಆರೋಪ; ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಉಪನ್ಯಾಸಕನ ಕಿರುಕುಳಕ್ಕೆ ಬೇಸತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿಯಲ್ಲಿ ನಡೆದಿದೆ.

ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜಿನ ಗಜೇಂದ್ರ (18) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಗಜೇಂದ್ರ ಎರಡನೇ ವರ್ಷದ ಮೆಕಾನಿಕ್ ಬ್ರ್ಯಾಂಚ್ ನಲ್ಲಿ ಓದುತ್ತಿದ್ದ.

ಕಾಲೇಜಿನಲ್ಲಿ ಉಪನ್ಯಾಸಕ ಮಂಜುನಾಥ್.ಎ ಎನ್ನುವವರು ಕಿರುಕುಳ ನೀಡುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ. ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿದ್ಯಾರ್ಥಿ ಸಾವಿಗೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿಟಿದ್ದಾನೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗುತ್ತಿದ್ದಂತೆ ಇತ್ತ ಕಾಲೇಜು ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಘಟನೆ ಬೆನ್ನಲ್ಲೇ ಉಪನ್ಯಾಸಕ ಮಂಜುನಾಥ್ ಪರಾರಿಯಾಗಿದ್ದಾರೆ. ಸ್ಥಳಕ್ಕೆ ನಂದಿಗಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


Bottom Add3
Bottom Ad 2

You cannot copy content of this page