Karnataka News

*ಪ್ರತಿಭಟನೆ ನಡೆಸಿದವರ ಮೇಲೆ ಫೈರಿಂಗ್: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕಲ್ಲು ಕ್ವಾರಿ ಕ್ರಷರ್ ಗೆ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಗುಂಡಿನ ದಾಳಿ ನಡೆಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಬಂಧಿತ ಆರೋಪಿ. ಅಕ್ರಮವಾಗಿ ರಸ್ತೆ ನಿರ್ಮಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸಕಲೇಶಕುಮಾರ್ ಗುಂಡಿನ ದಾಳಿ ನಡೆಸಿದ್ದರು. ಒಂದು ಗುಂಡು ಚಿಕನ್ ರವಿ ಎಂಬುವವರ ದೇಹ ಹೊಕ್ಕಿದೆ. ಅವರ ಸ್ಥಿತಿ ಗಂಭಿರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಪ್ರಕರಣ ಸಂಬಂಧ ಆರೋಪಿಯನ್ನು ಮಂಚೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Related Articles

Back to top button