Kannada NewsKarnataka News

*ಕರ್ತವ್ಯ ನಿರ್ವಹಿಸುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಸೆಕ್ಯೂರಿಟಿ ಗಾರ್ಡ್*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೆಕ್ಯೂರಿಟಿಗಾರ್ಡ್ ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದು, ಹೃಅದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಚೇರ್ ಮೇಲೆ ಕುಳಿತಿದ್ದಗಲೇ ಹೃದಯಾಘಾತವಾಗಿ ಕುಸಿದುಬಿದ್ದು ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಸಾತ್ವಿಕ್ ಟಿವಿಎಸ್ ಶೋ ರೂಂ ನಲ್ಲಿ ನಡೆದಿದೆ.

ಶಿವಾನಂದ್ (55) ಹೃದಯಾಘಾತದಿಂದ ಸಾವನ್ನಪ್ಪಿರುವ ಸೆಕ್ಯೂರಿಟಿ ಗಾರ್ಡ್. ಚಿಕ್ಕಮಗಳೂರು ನಗರದ ಸಾತ್ವಿಕ್ ಟಿವಿಎಸ್ ಶೋರೂಂ ನಲ್ಲಿ ಈ ದುರಂತ ಸಂಭವಿಸಿದೆ.

ಹಿರೇಗೌಜ ಗ್ರಾಮದ ನಿವಾಸಿಯಾಗಿದ್ದ ಶಿವಾನಂದ್, 6 ತಿಂಗಳ ಹಿಂದಷ್ಟೇ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸಕ್ಕೆ ಸೇರಿದ್ದರು. ಇಂದು ಎಂದಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ತಮ್ಮ ಚೇರ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt


Related Articles

Back to top button