Karnataka News

*ಕೆಲವೇ ಕ್ಷಣಗಳಲ್ಲಿ ಮೋಸ್ಟ್ ವಾಂಟೆಡ್ 6 ನಕ್ಸಲರು ಶರಣಾಗತಿ*

ಪ್ರಗತಿವಾಹಿನಿ ಸುದ್ದಿ: ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ 6 ನಕ್ಸಲರು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಂದೆ ಶರಣಾಗತರಾಗಲಿದ್ದಾರೆ.

ಚಿಕ್ಕಮಗಳೂರಿನ ಕಾಡಿನಲ್ಲಿ ಅಡಗಿದ್ದ 6 ನಕ್ಸಲರು ಇಂದು ಬೆಂಗಳೂರಿನಲ್ಲಿ ಸಿಎಂ ಹಾಗೂ ಗೃಹ ಸಚಿವರ ಮುಂದೆ ಶರಣಾಗಲಿದ್ದಾರೆ. 24 ವರ್ಷಗಳ ಬಳಿಕ 6 ನಕ್ಸಲರು ಶರಣಾಗತರಾಗುತ್ತಿರುವುದು ಕರ್ನಾಟಕದ ಇತಿಹಾಸದಲ್ಲಿಯೇ ಅತಿ ದೊಡ್ಡ ನಕ್ಸಲರ ಗುಂಪಿನ ಶರಣಾಗತಿಯಾಗಿದೆ.

ಈಗಾಗಲೇ ನಕ್ಸಲರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚಿಕ್ಕಮಗಳೂರಿನಿಂದ ನಕ್ಸಲರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.

Home add -Advt

ನಕ್ಸಲರಾದ ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗತರಾಗಲು ನಿರ್ಧರಿಸಿದ್ದು, ಶಂತಿಗಾಗಿ ನಾಗರಿಕ ವೇದಿಕೆ ಸದಸ್ಯರೊಂದಿಗೆ ನಕ್ಸಲರು ಹಾಗೂ ನಕ್ಸಲರ ಕುಟುಂಬ ಸದಸ್ಯರು ಬೆಂಗಳೂರಿನತ್ತ ಆಗಮಿಸುತ್ತಿದ್ದಾರೆ. ಕೆಲ ಸಮಯದಲ್ಲೇ ಸರ್ಕಾರದ ಮುಂದೆ ಶರಣಾಗಲಿದ್ದಾರೆ.

Related Articles

Back to top button