*ಸೇತುವೆಯಿಂದ ನದಿಗೆ ಜಿಗಿದು ನರ್ಸ್ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದು ನರ್ಸ್‌ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಡುಬು ಗ್ರಾಮದ ಬಳಿ ಈ ಘಟನೆ ನಡೆದಿದೆ. ಮುತ್ತಿನಕೊಪ್ಪದ ರನ್ಯಾ (34) ಆತ್ಮಹತ್ಯೆಗೆ ಶರಣಾದವರು​. ರನ್ಯಾ ಶಿವಮೊಗ್ಗದ ಖಾಸಗಿ ಆಸ್ಪತೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ರನ್ಯಾ ಸೇತುವೆ ಮೇಲಿಂದ ನದಿಗೆ ಹಾರಿದ್ದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ನದಿಯಿಂದ ಹೊರ ತೆಗೆಯಲಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದವರಾದ ರನ್ಯಾ ಅವರಿಗೆ … Continue reading *ಸೇತುವೆಯಿಂದ ನದಿಗೆ ಜಿಗಿದು ನರ್ಸ್ ಆತ್ಮಹತ್ಯೆ*