Kannada NewsKarnataka NewsLatest

*ಪ್ರತಿಷ್ಠಿತ ವಸತಿ ಶಾಲೆಯಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡು; ವಿದ್ಯಾರ್ಥಿಗಳು ಕಂಗಾಲು*

ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರು ಜಿಲ್ಲೆಯ ಪ್ರತಿಷ್ಠಿತ ವಸತಿ ಶಾಲೆ ಆಂಬರ್ ವ್ಯಾಲಿ ಖಾಸಗಿ ಶಾಲೆಯಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟಿರುವ ಘಟನೆ ನಡೆದಿದೆ.

30 ಕಾಡಾನೆಗಳಿರುವ ದಂಡು ಬೀಡುಬಿಟ್ಟಿದ್ದು, ವಸತಿ ಶಾಲೆಯಲ್ಲಿರುವ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಶಿಕ್ಷಕರು, ಪೋಷಕರು ಆತಂಕಕ್ಕೀಡಾಗಿದ್ದಾರೆ. ಮುಂಜಾಗೃತಾ ಕ್ರಮವಾಗಿ ವಸತಿ ಶಾಲೆಯ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಕುಮ್ಕಿ ಆನೆಗಳನ್ನು ಬಳಸಿ ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಾನೆಗಳ ಕಾರ್ಯಾಚರಣೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಆಂಬರ್ ವ್ಯಾಲಿ ಶಾಲೆಯ ಸುತಮುತ್ತಲಿನ ಗ್ರಾಮಗಳಾದ ಮೂಗ್ತಿಹಳ್ಳಿ, ಕದ್ರಿಮಿದ್ರಿ, ರಾಂಪುರ, ನಲ್ಲೂರು ಸೇರಿದಂತೆ 9 ಗ್ರಾಮಗಳಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.


Related Articles

Back to top button