Karnataka NewsLatest

*ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಯುವಕ* *ಆಳ್ವಾಸ್ ಕಾಲೇಜಿನಲ್ಲಿ ಘಟನೆ*

ಪ್ರಗತಿವಾಹಿನಿ ಸುದ್ದಿ: ಪ್ರೇಮ ವೈಫಲ್ಯಕ್ಕೆ ಪಿಯು ವಿದ್ಯಾರ್ಥಿನಿಗೆ ಯುವಕನೊಬ್ಬ ಕತ್ತರಿಯಿಂದ ಇರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ.

ಪ್ರೀತಿ ನಿರಾಕರಿಸಿದ್ದಕ್ಕಾಗಿ ಯುವಕ, ವಿದ್ಯಾರ್ಥಿನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತುಮಕೂರು ಮೂಲದ ಯುವಕ ಮಂಜುನಾಥ್ ಎಂಬಾತನನ್ನು ಬಂಧಿಸಿದ್ದಾರೆ.

Related Articles

ಆಳ್ವಾಸ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಯುವಕ ಕಾಲೇಜಿನಲ್ಲಿಯೇ ಹಲ್ಲೆ ನಡೆಸಿದ್ದಾನೆ. ಘಟನೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಯುವಕನ ವಿರುದ್ಧ ಹಲ್ಲೆ ಹಾಗೂ ಕೊಲೆಯತ್ನ ಕೇಸ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button