Kannada NewsKarnataka NewsLatestSports

*ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು: ಕೇಸ್ ದಾಖಲಿಸಿಕೊಂಡ ಮಕ್ಕಳ ಹಕ್ಕುಗಳ ಆಯೋಗ*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿರುವ ಪ್ರಕರಣ್ ಅಸಂಬಂಧ ಇದೀಗ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಕೇಸ್ ದಾಖಲಿಸಿಕೊಂಡಿದೆ.

Home add -Advt

ಕಾಲ್ತುಳಿತ ದುರಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಸಿಐಡಿಗೆ ಪತ್ರ ಬರೆದಿದೆ.

ಕಾಲ್ತುಳಿತ ದುರಂತದಲ್ಲಿ ಮಕ್ಕಳಿಗೂ ಹಾನಿಯಾಗಿರುವ ಶಂಕೆ ಇದೆ. ಈ ನಿಟ್ಟಿನಲ್ಲಿ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಹಾಗೂ ಎಷ್ಟು ಮಕ್ಕಳಿಗೆ ತೊಂದರೆಯಾಗಿದೆ? ಎಂಬುದನ್ನು ತಿಳಿಸುವಂತೆ ಪತ್ರದಲ್ಲಿ ಕೇಳಲಾಗಿದೆ.

ಈ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಸಿಐಡಿಗೆ ಪತ್ರ ಬರೆದಿದ್ದು, ವಿವರ ನೀಡುವಂತೆ ಕೋರಿದ್ದಾರೆ.

Related Articles

Back to top button