
ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ವಿಜಯೋತ್ಸವ ವೇಳೆ ಬೆಂಗಳುರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಕಾಲ್ತುಳಿತ ದುರಂತ ಪ್ರಕರಣದ ಬಗ್ಗೆ ಹೈಕೋರ್ಟ್ ಸ್ವಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದ್ದು, ಇಂದು ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸರ್ಕಾರ ಹಾಗೂ ಎರಡೂ ಕಡೆಯ ವಕೀಲರ ವಾದ ಆಲಿಸಿತು. ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಇದೇ ವೇಳೆ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ಜೂನ್ 10 ಮುಂದೂಡಿ ಆದೇಶ ಹೊರಡಿಸಿದೆ.