
ಪ್ರಗತಿವಾಹಿನಿ ಸುದ್ದಿ: 18 ವರ್ಷದ ಬಳಿಕ ಆರ್ ಸಿಬಿ ಐಪಿಎಲ್ ಟ್ರೋಫಿ ಗೆದ್ದ ಹಿನೆಲೆಯಲ್ಲಿ ಆರ್ ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಆರ್ ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಎ1 ಆರ್ ಸಿಬಿ ಮ್ಯಾನೇಜ್ಮೆಂಟ್, ಎ2 ಡಿಎನ್ ಎ ಇವೆಂಟ್ ಮ್ಯಾನೇಜ್ಮೆಂಟ್, ಎ3 ಕೆ ಎಸ್ ಸಿಎ ವಿರುದ್ಧ ಬಿಎನ್ ಎಸ್ ಸೆಕ್ಷನ್ 105, 115, 118 ಅಡಿ ಮೊಕದ್ದಮೆ ದಾಖಲಾಗಿದೆ.