Belagavi NewsBelgaum NewsKannada NewsKarnataka NewsLatest
ರಸ್ತೆ ಅಪಘಾತ: ಓರ್ವ ಸಾವು

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಗೋವಾದಿಂದ ಹುಬ್ಬಳ್ಳಿ ಮಾರ್ಗವಾಗಿ ತೇಲಂಗಾಣ ರಾಜ್ಯದತ್ತ ಹೊರಟಿದ್ದ ಪ್ರಯಾಣಿಕರ ಕಾರು ಅಳ್ನಾವರದಿಂದ ರಾಮನಗರ ಕಡೆಗೆ ಹೊರಟಿದ್ದ ಕಾರಿಗೆ ಎದುರಿನಿಂದ ಬಂದು ವೇಗವಾಗಿ ಅಪ್ಪಳಿಸಿದ ಪರಿಣಾಮ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ತಾಲೂಕಿನ ನಾಗರಗಾಳಿ ಗ್ರಾಮದ ಬಳಿ ಮಂಗಳವಾರ ವರದಿಯಾಗಿದೆ.
ಮೃತರನ್ನು ವಾಸ್ಕೋ ನಿವಾಸಿ ಅಮೀರಖಾನ ಬೆಂಡಿಗೇರಿ (೨೬) ಎಂದು ಗುರುತಿಸಲಾಗಿದೆ. ಮೃತರ ಸಹೋದರ ನೀಡಿದ ದೂರಿನನ್ವಯ ಆಂಧ್ರಪ್ರದೇಶದ ಮೂಲದ ರಾಜಶೇಖರ ರೆಡ್ಡಿ ಎಂಬಾತನ ವಿರುದ್ಧ ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




