Belagavi NewsBelgaum NewsKannada NewsKarnataka NewsNationalPolitics

*ಬೆಳಗಾವಿ ನ್ಯಾಯಾಲಕ್ಕೆ ಸಿಟಿ ರವಿ ಹಾಜರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರ ಮೇಲೆ ಅವಾಚ್ಯ ಶಬ್ದ ಬಳಕೆ ಮಾಡಿರುವ ಆರೋಪದ ಮೇಲೆ ಬಂಧನವಾಗಿರುವ ಎಂಎಲ್ಸಿ ಸಿ.ಟಿ. ರವಿ ಅವರನ್ನು ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದಾರೆ.

ಆರೋಗ್ಯ ತಪಾಸಣೆ ಬಳಿಕ ಸಿಟಿ ರವಿ ಅವರನ್ನು ಪೊಲೀಸರು ಬೆಳಗಾವಿ ನ್ಯಾಯಲಕ್ಕೆ ಹಾಜರು ಪಡಿಸಿದ್ದಾರೆ. ಸಿಟಿ ರವಿ ಅವರನ್ನು ಕೋರ್ಟ್ ಗೆ ಹಾಜರು ಪಡಿಸುತ್ತಿದಂತೆ ಕೋರ್ಟ್ ಆವರಣದಲ್ಲಿ ಜಮೆ ಆಗಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ದಿಕ್ಕಾರ ಕೂಗಿದ್ದಾರೆ. ಸಿಟಿ ರವಿ ಜೊತೆ ಕೋರ್ಟ್ ಒಳಗಡೆ ಬಿಜೆಪಿ ರಾಜ್ಯಾದ್ಯಕ್ಷ ಬಿ ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಹೊಗಿದ್ದಾರೆ. ನ್ಯಾಯಾಲಯದ ಬಳಿ ಬಿಗಿ ಪೊಲೀಸ್ ಭದ್ರತೆ ನೀಯೋಜಿಸಲಾಗಿದೆ.

Related Articles

Back to top button