ವಿನಯ ಕುಲಕರ್ಣಿಗೆ ಜೈಲಲ್ಲೇ ದೀಪಾವಳಿ: 14 ದಿನ ನ್ಯಾಯಾಂಗ ಬಂಧನ

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ –  ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನ.23ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿಸಿ ಹುಬ್ಬಳ್ಳಿಯ 3ನೇ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಹಾಗಾಗಿ ದೀಪಾವಳಿಯನ್ನು ಜೈಲಲ್ಲೇ ಆಚರಿಸಬೇಕಿದೆ.

ಇಂದು 3 ದಿನಗಳ ಸಿಬಿಐ ಕಸ್ಟಡಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 23ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ.

Home add -Advt

ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರರು ಸಿಬಿಐ ವಶಕ್ಕೆ

ವಿನಯ ಕುಲಕರ್ಣಿ ಹಿಂಡಲಗಾ ಜೈಲಿಗೆ – ವಿಡೀಯೋ ಸಹಿತ ವರದಿ – Updated

ಜನ್ಮ ದಿನದಂದೇ ವಿನಯ ಕುಲಕರ್ಣಿ ಕಸ್ಟಡಿಗೆ ಪಡೆಯಲು ಜೈಲಿಗೆ ಆಗಮಿಸಿದ ಸಿಬಿಐ – ವಿಡೀಯೋ ಸಹಿತ ವರದಿ

 

Related Articles

Back to top button