ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಗದ್ದಲ-ಕೋಲಾಹಲ ಆರಂಭಿಸಿದ್ದಾರೆ.
ಕಾಂಗ್ರೆಸ್ ಸದಸ್ಯರ ವಿರೋಧದ ನಡುವೆಯೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಜೆಟ್ ಮಂಡನೆ ಆರಂಭಿಸಿದ್ದು, ಈ ವೇಳೆ ಎದ್ದುನಿಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೋಂದು ಅನೈತಿಕ ಸರ್ಕಾರವಾಗಿದ್ದು, ಬಜೆಟ್ ಮಂಡನೆಗೆ ನೈತಿಕತೆ ಇಲ್ಲ ಎಂದು ಹೇಳಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು ಕೂಡ ಸರ್ಕಾರದ ವಿರುದ್ಧ ಘೋಷನೆ ಕೂಗಿ ಗದ್ದಲವೆಬ್ಬಿಸಿದರು ಆರಂಭಿಸಿದರು. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು.
ಕಾಂಗ್ರೆಸ್ ಸಭಾತ್ಯಾಗ ಮಾಡುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಕಾಂಗ್ರೆಸ್ ವಿರುದ್ಧ ಜೈ ಶ್ರೀರಾಮ್ ಘೋಷಣೆ ಕೂಗಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ