ಗೆದ್ದ 9 ಶಾಸಕರಿಗೆ ಮಾತ್ರ ಸಚಿವ ಸ್ಥಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಪಚುನಾವಣೆ ಫಲಿತಾಂಶ ಪ್ರಕಟವಾಗಿ ಹಲವು ದಿನಗಳೇ ಕಳೆದರೂ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಮೀನಾಮೇಷ ಎಣಿಸುತ್ತಿದ್ದಾರೆ. ಈ ನಡುವೆ ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಣೆ ಆಗಲಿದೆ ಎನ್ನಲಾಗುತ್ತಿದ್ದು, 9 ಶಾಸಕರಿಗೆ ಮಂತ್ರಿ ಸ್ಥಾನ ದೊರೆಯುವುದು ಖಚಿತವಾಗಿದೆ.

ಉಪಚುನಾವಣೆಗೂ ಮೊದಲು ಗೆದ್ದ ಎಲ್ಲ ಅನರ್ಹರಿಗೂ ಸಚಿವ ಸ್ಥಾನ ನೀಡುವುದಾಗಿ ಸಿಎಂ ಯಡಿಯೂರಪ್ಪ ನೀಡಿದ್ದ ಭರವಸೆಯಲ್ಲಿ ಇದೀಗ ಬಾದಲಾವಣೆ ಕಂಡುಬಂದಿದ್ದು, ಗೆದ್ದ ಶಾಸಕರ ಪೈಕಿ 9 ಶಾಸಕರಿಗೆ ಮಾತ್ರ ಮಂತ್ರಿ ಪಟ್ಟ ನೀಡಲು ನಿರ್ಧರಿಸಿದ್ದಾರೆ.

ಈ ನಿಟ್ಟಿನಲ್ಲಿ ಜನವರಿ 12 ಅಥವಾ 13ರಂದು ಸಿಎಂ ಬಿಎಸ್​ವೈ ಹೈಕಮಾಂಡ್​ ಭೇಟಿಗೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಈ ವೇಳೆ ತಮ್ಮ ಲೆಕ್ಕಾಚಾರವನ್ನು ಹೈಕಮಾಂಡ್​ ಎದುರಿಡಲು ನಿರ್ಧಾರಿಸಿದ್ದಾರೆ.

ಉಪ ಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್​, ಹೆಚ್​ ವಿಶ್ವನಾಥ್​ಗೆ ಸಚಿವ ಸ್ಥಾನ ಸಿಗುವುದು ಅನುಮಾನ.  ಒಟ್ಟಾರೆ ಜ.18ರೊಳಗೆ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button