Latest

ಲಾಕ್ ಡೌನ್ ಸುಳಿವು ನೀಡಿದ ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಈ ಕುರಿತು ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದಾರೆ.

ಕೊರೊನಾ ಪಿಡುಗು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅಣ್ಣಮ್ಮ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಕೊರೊನಾ ಸೋಂಕು ಕಡಿಮೆಯಾಗಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾಗಿ ತಿಳಿಸಿದರು.

ಇದೇ ವೇಳೆ ರಾಜ್ಯದಲ್ಲಿ ಜನತಾ ಕರ್ಫ್ಯೂ ಸರಿಯಾಗಿ ಪಾಲನೆಯಾಗುತ್ತಿಲ್ಲ. ಹಾಗಾಗಿ ಇನ್ನಷ್ಟು ಬಿಗಿ ಕ್ರಮ ಅನಿವಾರ್ಯ. ಇಂದು ಅಥವಾ ನಾಳೆ ಸಚಿವರು ಹಾಗೂ ಶಾಸಕರ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಕಠಿಣ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ಮೂಲಕ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯ ಸುಳಿವು ನೀಡಿದ್ದಾರೆ.
ಬೆಳಗಾವಿಗೆ ಬರುತ್ತಿದ್ದ ಆಕ್ಸಿಜನ್ ಟ್ಯಾಂಕರ್ ಅಪಘಾತ

Home add -Advt

Related Articles

Back to top button