Latest

ಒಂದು ರಸ್ತೆಯಲ್ಲಿ 5 ಜನ ಸಿಎಂಗಳಾಗಿದ್ದಾರೆ; ಅದರಲ್ಲಿ ನಾನೂ ಒಬ್ಬ ಎಂದ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ಬೆಂಗಳೂರು ಹೆಬ್ಬಾಳ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಅಭಿನಂದನೆಗಳನ್ನು ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಂಗಳೂರು ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ಸೂಚಿಸಿದ್ದಾರೆ ಎಂದರು.

ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರ ಭೇಟಿ ಬಳಿಕ ಮಾತನಾಡಿದ ಸಿಎಂ, ಹೆಬ್ಬಾಳ ಕ್ಷೇತ್ರದ ಒಂದು ರಸ್ತೆಯಲ್ಲಿ 5 ಜನ ಮುಖ್ಯಮಂತ್ರಿಗಳಾಗಿದ್ದಾರೆ. ಹೆಬ್ಬಾಳ ಕ್ಷೇತ್ರದ ಇದೇ ರಸ್ತೆಯಲ್ಲಿ ಐದು ಜನ ಸಿಎಂಗಳಾಗಿದ್ದಾರೆ, ನಂದು ಇದೇ ರೆಸಿಡೆನ್ಸಿ, ನಾನೂ ನಿಮ್ಮಲ್ಲಿ ಒಬ್ಬ ಎಂಬುದು ಖುಷಿಯ ವಿಚಾರ ಎಂದರು.

ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ನಗರ. ನಗರದ ಸರ್ವಾಂಗೀಣ ಅಭಿವೃದ್ಧಿ ಮಾಡಬೇಕು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಟೂರಿಸಂ, ಕಲ್ಚರ್ ಎಲ್ಲವೂ ಬಂಗಳೂರಿಗೆ ಬರಲಿದೆ. ಇನ್ನು ಬಿಬಿಎಂಪಿ ಚುನಾವಣೆಯಲ್ಲಿ ಹೆಬ್ಬಾಳದ 8 ವಾರ್ಡ್ ಗಳಲ್ಲೂ ಬಿಜೆಪಿ ಗೆಲುವು ಸಾಧಿಸಬೇಕು ಎಂದು ಹೇಳಿದರು.

ಕೋವಿಡ್ ಗೆ ಹೆದರಿ ದಂಪತಿ ಆತ್ಮಹತ್ಯೆ; ಸಾವಿಗೂ ಮುನ್ನ ವಾಯ್ಸ್ ಮೆಸೆಜ್

Home add -Advt

Related Articles

Back to top button