Kannada NewsLatest

ಶಾಲಾ-ಕಾಲೇಜುಗಳಿಗೆ ಅನುದಾನ, ಪಿಂಚಣಿ, NPS ರದ್ದು ಸೇರಿದಂತೆ ವಿವಿಧ ಬೇಡಿಕೆ: ಅರುಣ ಶಹಾಪುರ ನೇತೃತ್ವದಲ್ಲಿ ಸಿಎಂಗೆ ಮನವಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ನೇತೃತ್ವದಲ್ಲಿ ಬೆಳಗಾವಿ ವಿಭಾಗದ ಶಿಕ್ಷಕರ ಸಂಘದ ಪ್ರಮುಖರು ಬುಧವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಸನ್ಮಾನಿಸಿದರು.

1995ರ ನಂತರ ಆರಂಭಗೊಂಡ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಡಿಸುವುದು, ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಪಿಂಚಣಿ ಸೌಲಭ್ಯ ಹಾಗೂ ಎನ್.ಪಿ.ಎಸ್ ರದ್ದು ಪಡಿಸಿ ಓ.ಪಿ.ಎಸ್ ಅನ್ನು ಮರು ಜಾರಿಗೊಳಿಸುವಂತೆ ಈ ವೇಳೆ ಮನವಿ ಮಾಡಿದರು.

Home add -Advt

ಬೆಳಗಾವಿ ವಿಭಾಗದ ಎಸ್.ಎಸ್. ಮಠದ್, ಕೋರಿಶೆಟ್ಟಿ, ಸಲೀಂ ಕಿತ್ತೂರು, ಪಿ.ಪಿ ಬೆಳಗಾಂವಕರ್ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳ ಒಕ್ಕೂಟದ ಅಧ್ಯಕ್ಷರಾದ ಶಿವಪ್ಪ ಉಪಸ್ಥಿತರಿದ್ದರು.
ರಾಜ್ಯದ ಡೀಮ್ಟ್ ವಿವಿಗಳಲ್ಲಿ ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳಿಗೆ ಪ್ರವೇಶ – ಕೋಡ್ ಯುನಿಕ್ ಅಧ್ಯಕ್ಷ ಡಾ.ಪ್ರಭಾಕರ ಕೋರೆ

Related Articles

Back to top button